6:37 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು