4:59 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ

25/09/2024, 19:29

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಅನ್ನ ಹಾಕಿದ ಮನೆ ಮಾಲಿಕನ ಮನೆಗೆ ಕನ್ನ ಹಾಕಿದ ಕಳ್ಳನೊಬ್ಬ ಮಾಲಿಕನ ಮನೆಯ ಬೀರುವಿನಲ್ಲಿದ್ದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ, ಬಾಳೆಹೊನ್ನೂರು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಕುಂಸಿ ಮೂಲದ ರವಿ ಬಿನ್ ತಿಮ್ಮಪ್ಪ ಎಂಬಾತ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿರುವ ಆರೋಪಿಯಾಗಿದ್ದಾನೆ. ಹೇರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಬ್ಳಿಯ ತಿಮ್ಮಪ್ಪಗೌಡ ಎಂಬುವವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಆರೋಪಿ ರವಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದ ಸುಮಾರು 8 ಗ್ರಾಂ ತೂಕದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ ಬಚ್ಚಿಟ್ಟಿದ್ದ. ಆರೋಪಿಯ ನಡತೆಯಿಂದ ಅನುಮಾನಗೊಂಡ ಮಾಲಿಕ ತಿಮ್ಮಪ್ಪಗೌಡ ಬಾಳೆಹೊನ್ನೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಕಾರ್ಯ ಪ್ರವೃತ್ತರಾದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಕ್ರೈಂ ಎಸ್ಐ ಅಭಿಷೇಕ್ ಆರೋಪಿಯನ್ನು ಬಂಧಿಸಿದ್ದಲ್ಲದೆ. ತಡರಾತ್ರಿ 2 ಘಂಟೆಯವರೆಗೆ ವಿಚಾರಣೆ ನಡೆಸಿ ಮಾಲಿಕರ ತಿಮ್ಮಪ್ಪಗೌಡರ ಮನೆಯ ಹಿಂಬಾಗದ ಕೊಟ್ಟಿಗೆಯ ಮಣ್ಣಿನ ಇಟ್ಟಿಗೆಗಳ ನಡುವೆ ಆರೋಪಿ ಬಚ್ಚಿಟ್ಟಿದ್ದ 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಅನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ರವಿ ತಡ ರಾತ್ರಿಯವರೆಗೂ ಕಳ್ಳತನ ಮಾಡಿರುವುದನ್ನು ಮುಚ್ಚಿಟ್ಟು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಪ್ರಯತ್ನಿಸಿದ್ದರೂ, ಮದ್ಯರಾತ್ರಿ 2 ಘಂಟೆಯವರೆಗೂ ಚಲಬಿಡದೆ ವಿಚಾರಣೆ ನಡೆಸಿದ ಪಿಎಸ್ಐ ರವೀಶ್, ಕ್ರೈಂ ಎಸ್ಐ ಅಭಿಷೇಕ್ ಹಾಗೂ ಸಿಬ್ಬಂದಿ ಶಂಕರ್ ಹಾಗೂ ಇತರ ಸಿಬ್ಬಂಧಿಗಳಿದ್ದ ತಂಡ ಕಳ್ಳತನ ನಡೆದ 10 ಘಂಟೆಯೊಳಗೆ ಆರೋಪಿಯನ್ನು ಕದ್ದ ಮಾಲಿನ ಸಮೇತ ಹೆಡೆ ಮುರಿ ಕಟ್ಟಿದೆ. ಕಳ್ಳತನ ಮಾಡುವವರಿಗೆ ಪೊಲೀಸರ ನಡೆ ನಡುಕಹುಟ್ಟಿಸಿದ್ದು, ಬಾಳೆಹೊನ್ನೂರು ಪೊಲೀಸರ ಈ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು