2:16 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ

25/09/2024, 19:29

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಅನ್ನ ಹಾಕಿದ ಮನೆ ಮಾಲಿಕನ ಮನೆಗೆ ಕನ್ನ ಹಾಕಿದ ಕಳ್ಳನೊಬ್ಬ ಮಾಲಿಕನ ಮನೆಯ ಬೀರುವಿನಲ್ಲಿದ್ದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ, ಬಾಳೆಹೊನ್ನೂರು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಕುಂಸಿ ಮೂಲದ ರವಿ ಬಿನ್ ತಿಮ್ಮಪ್ಪ ಎಂಬಾತ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿರುವ ಆರೋಪಿಯಾಗಿದ್ದಾನೆ. ಹೇರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಬ್ಳಿಯ ತಿಮ್ಮಪ್ಪಗೌಡ ಎಂಬುವವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಆರೋಪಿ ರವಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದ ಸುಮಾರು 8 ಗ್ರಾಂ ತೂಕದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ ಬಚ್ಚಿಟ್ಟಿದ್ದ. ಆರೋಪಿಯ ನಡತೆಯಿಂದ ಅನುಮಾನಗೊಂಡ ಮಾಲಿಕ ತಿಮ್ಮಪ್ಪಗೌಡ ಬಾಳೆಹೊನ್ನೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಕಾರ್ಯ ಪ್ರವೃತ್ತರಾದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಕ್ರೈಂ ಎಸ್ಐ ಅಭಿಷೇಕ್ ಆರೋಪಿಯನ್ನು ಬಂಧಿಸಿದ್ದಲ್ಲದೆ. ತಡರಾತ್ರಿ 2 ಘಂಟೆಯವರೆಗೆ ವಿಚಾರಣೆ ನಡೆಸಿ ಮಾಲಿಕರ ತಿಮ್ಮಪ್ಪಗೌಡರ ಮನೆಯ ಹಿಂಬಾಗದ ಕೊಟ್ಟಿಗೆಯ ಮಣ್ಣಿನ ಇಟ್ಟಿಗೆಗಳ ನಡುವೆ ಆರೋಪಿ ಬಚ್ಚಿಟ್ಟಿದ್ದ 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಅನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ರವಿ ತಡ ರಾತ್ರಿಯವರೆಗೂ ಕಳ್ಳತನ ಮಾಡಿರುವುದನ್ನು ಮುಚ್ಚಿಟ್ಟು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಪ್ರಯತ್ನಿಸಿದ್ದರೂ, ಮದ್ಯರಾತ್ರಿ 2 ಘಂಟೆಯವರೆಗೂ ಚಲಬಿಡದೆ ವಿಚಾರಣೆ ನಡೆಸಿದ ಪಿಎಸ್ಐ ರವೀಶ್, ಕ್ರೈಂ ಎಸ್ಐ ಅಭಿಷೇಕ್ ಹಾಗೂ ಸಿಬ್ಬಂದಿ ಶಂಕರ್ ಹಾಗೂ ಇತರ ಸಿಬ್ಬಂಧಿಗಳಿದ್ದ ತಂಡ ಕಳ್ಳತನ ನಡೆದ 10 ಘಂಟೆಯೊಳಗೆ ಆರೋಪಿಯನ್ನು ಕದ್ದ ಮಾಲಿನ ಸಮೇತ ಹೆಡೆ ಮುರಿ ಕಟ್ಟಿದೆ. ಕಳ್ಳತನ ಮಾಡುವವರಿಗೆ ಪೊಲೀಸರ ನಡೆ ನಡುಕಹುಟ್ಟಿಸಿದ್ದು, ಬಾಳೆಹೊನ್ನೂರು ಪೊಲೀಸರ ಈ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು