1:36 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ

25/09/2024, 19:29

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಅನ್ನ ಹಾಕಿದ ಮನೆ ಮಾಲಿಕನ ಮನೆಗೆ ಕನ್ನ ಹಾಕಿದ ಕಳ್ಳನೊಬ್ಬ ಮಾಲಿಕನ ಮನೆಯ ಬೀರುವಿನಲ್ಲಿದ್ದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ, ಬಾಳೆಹೊನ್ನೂರು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ಸಾಗರ ತಾಲೂಕಿನ ಕುಂಸಿ ಮೂಲದ ರವಿ ಬಿನ್ ತಿಮ್ಮಪ್ಪ ಎಂಬಾತ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿರುವ ಆರೋಪಿಯಾಗಿದ್ದಾನೆ. ಹೇರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಬ್ಳಿಯ ತಿಮ್ಮಪ್ಪಗೌಡ ಎಂಬುವವರ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಆರೋಪಿ ರವಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದ ಸುಮಾರು 8 ಗ್ರಾಂ ತೂಕದ ಚಿನ್ನದ ಬ್ರೇಸ್ ಲೈಟ್ ಕಳವು ಮಾಡಿ ಬಚ್ಚಿಟ್ಟಿದ್ದ. ಆರೋಪಿಯ ನಡತೆಯಿಂದ ಅನುಮಾನಗೊಂಡ ಮಾಲಿಕ ತಿಮ್ಮಪ್ಪಗೌಡ ಬಾಳೆಹೊನ್ನೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಕಾರ್ಯ ಪ್ರವೃತ್ತರಾದ ಬಾಳೆಹೊನ್ನೂರು ಪಿಎಸ್ಐ ರವೀಶ್ ಹಾಗೂ ಕ್ರೈಂ ಎಸ್ಐ ಅಭಿಷೇಕ್ ಆರೋಪಿಯನ್ನು ಬಂಧಿಸಿದ್ದಲ್ಲದೆ. ತಡರಾತ್ರಿ 2 ಘಂಟೆಯವರೆಗೆ ವಿಚಾರಣೆ ನಡೆಸಿ ಮಾಲಿಕರ ತಿಮ್ಮಪ್ಪಗೌಡರ ಮನೆಯ ಹಿಂಬಾಗದ ಕೊಟ್ಟಿಗೆಯ ಮಣ್ಣಿನ ಇಟ್ಟಿಗೆಗಳ ನಡುವೆ ಆರೋಪಿ ಬಚ್ಚಿಟ್ಟಿದ್ದ 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಅನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ರವಿ ತಡ ರಾತ್ರಿಯವರೆಗೂ ಕಳ್ಳತನ ಮಾಡಿರುವುದನ್ನು ಮುಚ್ಚಿಟ್ಟು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಪ್ರಯತ್ನಿಸಿದ್ದರೂ, ಮದ್ಯರಾತ್ರಿ 2 ಘಂಟೆಯವರೆಗೂ ಚಲಬಿಡದೆ ವಿಚಾರಣೆ ನಡೆಸಿದ ಪಿಎಸ್ಐ ರವೀಶ್, ಕ್ರೈಂ ಎಸ್ಐ ಅಭಿಷೇಕ್ ಹಾಗೂ ಸಿಬ್ಬಂದಿ ಶಂಕರ್ ಹಾಗೂ ಇತರ ಸಿಬ್ಬಂಧಿಗಳಿದ್ದ ತಂಡ ಕಳ್ಳತನ ನಡೆದ 10 ಘಂಟೆಯೊಳಗೆ ಆರೋಪಿಯನ್ನು ಕದ್ದ ಮಾಲಿನ ಸಮೇತ ಹೆಡೆ ಮುರಿ ಕಟ್ಟಿದೆ. ಕಳ್ಳತನ ಮಾಡುವವರಿಗೆ ಪೊಲೀಸರ ನಡೆ ನಡುಕಹುಟ್ಟಿಸಿದ್ದು, ಬಾಳೆಹೊನ್ನೂರು ಪೊಲೀಸರ ಈ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು