12:30 PM Sunday26 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

25/09/2024, 21:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾರದ 6 ದಿನಗಳಲ್ಲೂ ಮಕ್ಕಳಿಗೆ ಮೊಟ್ಟೆ ನೀಡಬೇಕೆಂದು ಸರ್ಕಾರ ಅದೇಶಿಸಿದ ಹಿನ್ನಲೆಯಲ್ಲಿ ಪಟ್ಟಣದ ಸಿಬಿನಕೆರೆ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಮೊಟ್ಟೆಗಾಗಿ ತಟ್ಟೆ ಹಿಡಿದು ಒಂದು ಘಂಟೆಗೂ ಜಾಸ್ತಿ ಹೊತ್ತು ಕಾದು ಕೂರುವ ಪರಿಸ್ಥಿತಿ ಸಿಬಿನಕೆರೆ ಶಾಲೆಯ ಪುಟ್ಟ ಪುಟ್ಟ ಮಕ್ಕಳಾದ್ದಾಗಿತ್ತು.

ಹೌದು, ತೀರ್ಥಹಳ್ಳಿಯ ಸೀಬಿನಕೆರೆ ಸರ್ಕಾರಿ ಶಾಲೆಯಲ್ಲಿ ಅದರಲ್ಲೂ ಶಾಸಕ ಆರಗ ಜ್ಞಾನೇಂದ್ರ ಅವರು ದತ್ತು ಪಡೆದ ಶಾಲೆಯಲ್ಲಿ ಪೌಷ್ಟಿಕ ಆಹಾರವನ್ನು ನೀಡಲು ಉದ್ಘಾಟನಾ ಕಾರ್ಯಕ್ರಮ ಬುಧವಾರ ಆಯೋಜನೆ ಮಾಡಲಾಗಿತ್ತು. ಆದರೆ ಶಾಸಕರು ಹೊಸನಗರ ಕಾರ್ಯಕ್ರಮಕ್ಕೆ ಹೋಗಿದ್ದ ಕಾರಣ ಸಮಯದ ಅಭಾವದಿಂದ ಶಾಲೆಯ ಪೌಷ್ಟಿಕ ಆಹಾರದ ಉದ್ಘಾಟನೆ ಆಗಮಿಸಲಿಲ್ಲ. ಆದರೂ ಕೂಡ ಮಕ್ಕಳ ಬಗ್ಗೆ ವಿಶೇಷ ಕಾಳಜಿಯಿಂದ ದೂರವಾಣಿ ಮೂಲಕ ಶಾಸಕರು ಕಾರ್ಯಕ್ರಮಕ್ಕೆ ಸಕಾಲಕ್ಕೆ ಬರಲು ಆಗುವುದಿಲ್ಲ ಯಾವುದೇ ಕಾರಣಕ್ಕೂ ಚಿಕ್ಕ ಚಿಕ್ಕ ಮಕ್ಕಳನ್ನು ಕಾಯಿಸುವುದು ಬೇಡ. ನೀವು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಮಾಮೂಲಿ ಕಾರ್ಯಕ್ರಮದಂತೆ, ಪ್ರಾಸ್ತಾವಿಕ ನುಡಿ, ಭಾಷಣ ಎಂದು ಮಕ್ಕಳನ್ನು 1 ಗಂಟೆಗಳ ಕಾಲ ಕಾಯಿಸಲಾಯಿತು. 1 ಗಂಟೆಯ ಬದಲಾಗಿ 2 :15ಕ್ಕೆ ಚಿಕ್ಕ ಚಿಕ್ಕ ಮಕ್ಕಳಿಗೆ ಮೊಟ್ಟೆ ನೀಡಲಾಯಿತು. ಸರಿ ಸುಮಾರು 1 ಗಂಟೆಗೂ ಅಧಿಕ ಕಾಲ ಮೊಟ್ಟೆಗಾಗಿ ಮಕ್ಕಳೆಲ್ಲರೂ ತಟ್ಟೆ ಹಿಡಿದು ಹಸಿವಿನಿಂದ ಕುಳಿತಿದ್ದರು. ಈ ಸಮಯದಲ್ಲಿ ಭಾಷಣ ಬೇಕಾ ಎಂಬಂತೆ ಮಕ್ಕಳ ಮುಖದ ಭಾವನೆ ಹೇಳುತ್ತಿತ್ತು. ಇಂತಹ ಕಾರ್ಯಕ್ರಮದಲ್ಲಿ ಭಾಷಣ ಬೇಡ ಎಂಬುದನ್ನು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು