3:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ!

26/09/2024, 12:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ ಬುಧವಾರ ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ. ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ 70 ಜನ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರ ನೀಡಿದ್ದ ಅಕ್ಕಿಯಲ್ಲಿ ಹುಳ ಆಗಿತ್ತಾ? ಅಥವಾ ಅದನ್ನು ಅಡುಗೆ ಮಾಡುವ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳು ಗಮನಿಸಲಿಲ್ಲವೇ? ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕಾದ ಅಲ್ಲಿನ ಸಿಬ್ಬಂದಿಗಳು ನಿರ್ಲಕ್ಷ್ಯತನ ತೋರಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.


ನಿನ್ನೆ ಸೊಪ್ಪಿನ ಸಾಂಬಾರ್ ನಲ್ಲೂ ಹುಳ ಇತ್ತು ಎಂದು ಹೇಳಲಾಗುತ್ತಿದ್ದು ಇಂದು ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ ಕಂಡಿದೆ. ಸುಮಾರು 70ಕ್ಕೂ ಹೆಚ್ಚು ಮಕ್ಕಳು ಬುಧವಾರ ಹಾಸ್ಟೆಲ್ ನಲ್ಲಿ ಇದ್ದು ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಈ ರೀತಿ ನಿರ್ಲಕ್ಷ್ಯತನ ವಹಿಸಿರುವುದು ಸರಿಯಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳಾದ ಆಶಾಲತಾ ಅವರು ತಕ್ಷಣ ಸ್ಥಳಕ್ಕೆ ಬೇಟಿ ಮಾಡಿ ಕ್ರಮ ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು