3:06 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭದ್ರಾ ರಿಸರ್ವ್ ಫಾರೆಸ್ಟ್ ನಲ್ಲಿ ಆನೆ ಹಂತಕರ ತಂಡ ಕಾರ್ಯಾಚರಣೆ?: ದಂತಕ್ಕಾಗಿ ಆನೆಗೆ ಗುಂಡಿಟ್ರಾ ಕಾಡುಗಳ್ಳರು?

26/09/2024, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಭದ್ರಾ ಮೀಸಲು ಅರಣ್ಯದ ಅಲ್ದಾರ ಬಳಿ ಆನೆ ಕಳೆಬರಹ ಪತ್ತೆಯಾಗಿದ್ದು,ಆನೆಯ ದಂತಕ್ಕಾಗಿ ಕಾಡುಗಳ್ಳರು ಆನೆಯನ್ನು ಗುಂಡಿಟ್ಟು ಕೊಂದಿರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆಯಾಗಿದೆ. ಆನೆ ತಿಂಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.


ಅಲ್ದಾರ ವಿಭಾಗದ ಭೈರಾಪುರ ವ್ಯಾಪ್ತಿಯಲ್ಲಿ ಯಥೇಚ್ಛವಾಗಿ ಕಾಡಾನೆಗಳು ಇವೆ. ಸ್ಥಳೀಯ ಮೀನುಗಾರರಿಂದ ಆನೆ ಕಳೆಬರಹದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಯಿತು. ಆನೆ ಸತ್ತ ಜಾಗದಲ್ಲಿ ಆನೆ ದಂತಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ದಂತಚೋರರು ದಂತಕ್ಕಾಗಿ ಆನೆಯನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಿಶೇಷವೆಂದರೆ,
ಆನೆ ಸತ್ತು ತಿಂಗಳಾದರೂ ವಿಷಯ ಅರಣ್ಯ ಇಲಾಖೆ ಗಮನಕ್ಕೆ ಬಂದಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡಲಾರಂಭಿಸಿದೆ.
ಆನೆ ಕಳೆಬರಹವನ್ನ ಅಧಿಕಾರಿಗಳು ಸರಿಯಾಗಿ ತಪಾಸಣೆ ಮಾಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.
ಪರಿಸರವಾದಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಅನುಮಾ‌ನ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು