6:38 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಭದ್ರಾ ರಿಸರ್ವ್ ಫಾರೆಸ್ಟ್ ನಲ್ಲಿ ಆನೆ ಹಂತಕರ ತಂಡ ಕಾರ್ಯಾಚರಣೆ?: ದಂತಕ್ಕಾಗಿ ಆನೆಗೆ ಗುಂಡಿಟ್ರಾ ಕಾಡುಗಳ್ಳರು?

26/09/2024, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಭದ್ರಾ ಮೀಸಲು ಅರಣ್ಯದ ಅಲ್ದಾರ ಬಳಿ ಆನೆ ಕಳೆಬರಹ ಪತ್ತೆಯಾಗಿದ್ದು,ಆನೆಯ ದಂತಕ್ಕಾಗಿ ಕಾಡುಗಳ್ಳರು ಆನೆಯನ್ನು ಗುಂಡಿಟ್ಟು ಕೊಂದಿರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆಯಾಗಿದೆ. ಆನೆ ತಿಂಗಳ ಹಿಂದೆಯೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.


ಅಲ್ದಾರ ವಿಭಾಗದ ಭೈರಾಪುರ ವ್ಯಾಪ್ತಿಯಲ್ಲಿ ಯಥೇಚ್ಛವಾಗಿ ಕಾಡಾನೆಗಳು ಇವೆ. ಸ್ಥಳೀಯ ಮೀನುಗಾರರಿಂದ ಆನೆ ಕಳೆಬರಹದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಯಿತು. ಆನೆ ಸತ್ತ ಜಾಗದಲ್ಲಿ ಆನೆ ದಂತಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ದಂತಚೋರರು ದಂತಕ್ಕಾಗಿ ಆನೆಯನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಿಶೇಷವೆಂದರೆ,
ಆನೆ ಸತ್ತು ತಿಂಗಳಾದರೂ ವಿಷಯ ಅರಣ್ಯ ಇಲಾಖೆ ಗಮನಕ್ಕೆ ಬಂದಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡಲಾರಂಭಿಸಿದೆ.
ಆನೆ ಕಳೆಬರಹವನ್ನ ಅಧಿಕಾರಿಗಳು ಸರಿಯಾಗಿ ತಪಾಸಣೆ ಮಾಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.
ಪರಿಸರವಾದಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಅನುಮಾ‌ನ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು