4:56 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು 112ಕ್ಕೆ ಕರೆ!!: ಗಲಾಟೆ ಎಂದು ಕರೆಸಿದ ವ್ಯಕ್ತಿ ನಿಜ ಹೇಳಿದಾಗ ದಂಗಾದ ಪೊಲೀಸರು!

27/09/2024, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ವ್ಯಕ್ತಿಯೊಬ್ಬರು ಪೊಲೀಸ್ ಜೀಪ್ ಕರೆಸಿಕೊಂಡ ಘಟನೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ನಡೆದಿದೆ.


ತರುವೆ ಗ್ರಾಮದ ಅಶೋಕ್ ಎಂಬವರು ಪೊಲೀಸರ
112 ಗೆ ಫೋನ್ ಮಾಡಿ, ‘ಸರ್… ಗಲಾಟೆ ಬೇಗ ಬನ್ನಿ’ ಅಂತ ಮನವಿ ಮಾಡಿದ್ದರು.
ಆದರೆ ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾರೆ. ಗಾಡಿ ಯಾವು ಇಲ್ಲ… ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಅವರು ರಿಕ್ವೆಸ್ಟ್ ಮಾಡಿದ್ದಾರೆ.
ಪೊಲೀಸರಿಗೆ ಒಂದು ಕ್ಷಣ ಅವಾಕ್ಕಾಗಿದ್ದಾರೆ. ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ. ಕೊನೆಗೆ ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್ ಗೆ ಪೊಲೀಸರು ಬುದ್ದಿವಾದ ಹೇಳಿದರು. ಕೊನೆಗೆ ಪೊಲೀಸರು ಲಾರಿ ನಿಲ್ಲಿಸಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು