ಇತ್ತೀಚಿನ ಸುದ್ದಿ
ತೀರ್ಥಹಳ್ಳಿ: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದ 6 ಮಂದಿಯ ಬಂಧನ
27/09/2024, 15:00
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಪ್ಲಾಂಟೇಶನ್ ಒಂದರಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ(ಜೂಜು) ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು
ಬಂಧಿಸಿದ್ದಾರೆ.
ತಾಲೂಕಿನ ಕೈಮರ ಬಳಿಯ ಪ್ಲಾಂಟೇಶನ್ ಒಂದರಲ್ಲಿ ರಾತ್ರಿ 11 ಗಂಟೆ ಸಮಯದಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಣದ ಸಮೇತ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.