3:50 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ: ಬೇಡಿಕೆ ಈಡೇರಿಕೆಗೆ ಆಗ್ರಹ

27/09/2024, 15:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗಿವೆ. ಆಧುನೀಕರಣವಾಗಿ, ತಾಂತ್ರಿಕವಾಗಿ ಎಲ್ಲಾ ಸಲಕರಣೆ ನೀಡದೇ ಕೆಲಸಗಳನ್ನು ಮೊಬೈಲ್ ನಲ್ಲಿ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ಬಗ್ಗೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷರಾದ ಚಂದ್ರಶೇಖರ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಎದುರು ಗುರುವಾರದಿಂದ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸಂದರ್ಭದಲ್ಲಿ ಮಾತನಾಡಿ ನಮಗೆ ಯಾವುದೇ ಕಚೇರಿ ಇಲ್ಲ, ಕೂರಲು ಕುರ್ಚಿ ಇಲ್ಲ, ಯಾವುದೇ ಗ್ರಾಮಕ್ಕೆ ಹೋದರೂ, ಅರಳಿ ಮರದ ಕೆಳಗೆ, ಸ್ಕೂಲ್, ಅಂಗನವಾಡಿ, ಅಥವಾ ಬೈಕ್ ನಲ್ಲಿ ಹೋಗುವಾಗ ರೈತರು ಸಿಕ್ಕಿದರೆ ಅದೇ ಜಾಗದಲ್ಲಿ ಸಹಿ, ಸೀಲ್ ಹಾಕಿ ಕೊಡುತ್ತೇವೆ. ನಾವು ಕಷ್ಟಪಟ್ಟು ಕೆಲಸ ಮಾಡುತ್ತಿರುವುದು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ, ಇಲ್ಲಿಯವರೆಗೆ ಯಾವುದೇ ಮೊಬೈಲ್, ಡಾಟಾ ಕೊಟ್ಟಿಲ್ಲ, ತಾಂತ್ರಿಕವಾಗಿ ಬದಲಾವಣೆ ಆಗಿದೆ. ಆದರೆ ಕೆಲಸ ಮಾಡಲು ಯಾವುದೇ ಅಗತ್ಯವಾದ ಸಲಕರಣೆ ನೀಡಿಲ್ಲ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಾದ ಸುಧೀರ್ ಮಾತನಾಡಿ, ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಪರಿಗಣನೆ ಮಾಡಿದ್ದಾರೆ. ಸಾರ್ವಜನಿಕರ ಹಾಗೂ ರೈತರ ಜೊತೆಗೆ ನಿಕಟ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈಗಿನ ತಂತ್ರಜ್ಞಾನ ಕಾಲದಲ್ಲಿ ಕಂದಾಯ ಇಲಾಖೆಯಲ್ಲಿರುವ 44 ಸಕಾಲ ಸೇವೆಗಳ ಪೈಕಿ 21 ಸೇವೆಗಳನ್ನು ನಮ್ಮ ಮೊಬೈಲ್ ಆಪ್ ನಲ್ಲಿ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಅದಕ್ಕೆ ಬೇಕಾದ ಡಾಟಾ ಹಾಗೂ ಇತರ ಫೆಸಿಲಿಟಿ ಕೊಡುತ್ತಿಲ್ಲ ಎಂದರು.
ಎಲ್ಲಾ ತಂತ್ರಜ್ಞಾನವನ್ನು ಮೊಬೈಲ್ ನಲ್ಲೆ ಅಳವಡಿಕೆ ಮಾಡಿರುವುದರಿಂದ ನಾವೆಲ್ಲರೂ ಎರಡರಿಂದ ಮೂರು ಗಂಟೆ ಮೊಬೈಲ್ ನಲ್ಲೆ ಕಳೆಯುವಂತಾಗಿದೆ. ರಜಾ ದಿನಗಳಲ್ಲಿಯೂ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಅಷ್ಟೇ ಅಲ್ಲದೆ ಕೆಲಸ ಇದ್ದ ಸಂದರ್ಭದಲ್ಲಿ ಸಮಯ ಮೀರಿದ್ದರೂ ಕೆಲಸ ಮಾಡಿಸಿ ಕೊಳ್ಳುತ್ತಿದ್ದಾರೆ. ಅಗತ್ಯವಾದ ಸಲಕರಣೆ ಇಲ್ಲದ ಕಾರಣ ಸಾರ್ವಜನಿಕರಿಗೂ ಸರಿಯಾದ ಸಮಯಕ್ಕೆ ಕೆಲಸ ಮಾಡಿಕೊಡಲು ಆಗುತ್ತಿಲ್ಲ ಎಂದರು.
ಗ್ರಾಮ ಆಡಳಿತ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದರೆ 30 ವರ್ಷಗಳ ಕಾಲ ಸೇವೆ ಮಾಡಿದರೂ ಸಹ ಗ್ರಾಮ ಆಡಳಿತ ಅಧಿಕಾರಿಯಾಗಿಯೇ ನಿವೃತ್ತಿಯಾಗುತ್ತಿದ್ದಾರೆ. ವರ್ಗಾವಣೆ ವಿಚಾರದಲ್ಲೂ ಸಹ ತಡೆದಿದ್ದಾರೆ. ಜಾತಿ ವಿಚಾರದಲ್ಲಿ ಸಣ್ಣ ತಪ್ಪುಗಳು ಆದರೂ ನಮ್ಮ ಮೇಲೆ ಕೇಸ್ ದಾಖಲು ಮಾಡುವ ಕೆಲಸ ಆಗುತ್ತಿದೆ ಅದು ನಿಲ್ಲಬೇಕು, ನಮ್ಮ ಬೇಡಿಕೆಗಳನ್ನು ಸ್ಪಂದಿಸದೆ ಇದ್ದರೆ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು