3:57 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ

27/09/2024, 23:44

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಸಭೆಯ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರ ಸಭೆಯ ಸದಸ್ಯೆ ಶಾರದಾ ಉದ್ಘಾಟಿಸಿದರು. ಕರ್ನಾಟಕ ಕಲಾ ಮತ್ತು ಸಾಂಸ್ಕೃತಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಯು.ಆರ್ ಶೆಟ್ಟಿ , ನಿರಂಜನ ಕೊರಕ್ಕೋಡು, ಕೆ. ಗುರುಪ್ರಸಾದ್ ಕೋಟೆಕಣಿ, ಲವ ಮೀಪುಗುರಿ, ದಿವಾಕರ ಅಶೋಕ್ ನಗರ, ಕುಶಲಕುಮಾರ್ ಪಾರಕಟ್ಟೆ ಮೊದಲಾದವರು ಸಲಹೆ ಸೂಚನೆಯಿತ್ತರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಅನಿಲ್ ರಾಜ್ ನಾಗರಕಟ್ಟೆ ವಂದಿಸಿದರು.
ಸಂಘಟನೆಗಳ ಸಮಾಲೋಚನಾ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು, ಪ್ರಧಾನ ಸಂಚಾಲಕರಾಗಿ ಕೆ . ಜಗದೀಶ ಕೂಡ್ಲು ಹಾಗೂ ಕಾರ್ಯಕ್ರಮ ಸಂಯೋಜನ ಸಮಿತಿಯ ಅಧ್ಯಕ್ಷರಾಗಿ ಗುರುಪ್ರಸಾದ್ ಕೋಟೆ ಕಣಿ, ಗೌರವ ಸಲಹೆಗಾರರಾಗಿ ಕೆ. ನಿರಂಜನ ಕೊರಕ್ಕೋಡು, ಸಂಚಾಲಕರಾಗಿ ಯು. ಆರ್ ಶೆಟ್ಟಿ ಮಂಗಳೂರು, ಪ್ರದೀಪ್ ಬೇಕಲ್, ದಿವಾಕರ ಅಶೋಕ್ ನಗರ್, ಶ್ರೀಕಾಂತ್ ಕಾಸರಗೋಡು, ಕುಶಲಕುಮಾರ್ ಕೆ., ಅನಿಲ್ ರಾಜ್ ನಾಗರಕಟ್ಟೆ, ಅವರನ್ನು ಆಯ್ಕೆ ಮಾಡಲಾಯಿತು.
2024 ನವೆಂಬರ್ 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ಇದರ ಪ್ರಚಾರ ಪತ್ರವನ್ನು ಕಾಸರಗೋಡು ನಗರಸಭಾ ಸದಸ್ಯೆ ಶಾರದಾ ಅವರು ಮಕ್ಕಳಿಗೆ ನೀಡಿ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು