6:11 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ವಾರ್ಷಿಕ ಹಬ್ಬ

29/09/2024, 19:46

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್‌ ಡಿ’ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಸಂಘಟನೆಯ ಕಾರ್ಯಕರ್ತರು ಭಕ್ತ ಜನರಿಂದ ದೇಣಿಗೆ ಸಂಗ್ರಹಿಸಿ ಚರ್ಚಿನ ಬಡ ಕುಟುಂಬಗಳಿಗೆ ಮನೆ ದುರಸ್ತಿ, ಮಕ್ಕಳ ಶಿಕ್ಷಣ, ವೈದ್ಯಕೀಯ ನೆರವು ಇತ್ಯಾದಿ ಸೇವಾ ಕಾರ್ಯಗಳನ್ನು ನಿಸ್ವಾರ್ಥ ಮನೋಭಾವದಿಂದ ಕಾಳಜಿ ವಹಿಸಿ ನಿರ್ವಹಿಸುತ್ತಾರೆ ಎಂದವರು ಅಭಿನಂದಿಸಿದರು.
ಬಲಿಪೂಜೆಯಲ್ಲಿ ಫಾ. ಅಶೋಕ್‌ ಡಿ’ಸೋಜಾ, ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಅಧ್ಯಕ್ಷ ಜೊಸ್ಲಿನ್‌ ಲೋಬೊ, ಉಪಾಧ್ಯಕ್ಷೆ ಲಿಝಿ ಫೆರ್ನಾಂಡಿಸ್‌, ಕಾರ್ಯದರ್ಶಿ ಆಗ್ನೆಸ್‌ ಡಿ’ಸಿಲ್ವಾ, ಖಜಾಚಿ ಪಾಸ್ಕಲ್‌ ಮೊಂತೇರೊ, ಸದಸ್ಯರಾದ ಚಾರ್ಲ್ಸ್ ಪಿಂಟೊ, ಫೆಲಿಕ್ಸ್‌ ಕ್ಯಾಸ್ತಲಿನೊ, ವಿನ್ಸೆಂಟ್‌ ಪಿಂಟೊ, ಬೆನೆಡಿಕ್ಟಾ ಡಿ’ಕುನ್ಹಾ, ರಿಚಾರ್ಡ್ ಫೆರ್ನಾಂಡಿಸ್‌ ಹಾಗೂ ಚರ್ಚಿನ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು