6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಅಕ್ಟೋಬರ್ 1 ಮತ್ತು 2:ಭಾರತೀಯ ಕಥೋಲಿಕ್ ಪತ್ರಕರ್ತರ ಸಂಘಟನೆಯ ಸಮಾವೇಶ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ

29/09/2024, 19:50

ಮಂಗಳೂರು(reporterkarnataka.com): ಭಾರತೀಯ ಕಥೋಲಿಕ ಪತ್ರಕರ್ತರ ಸಂಘಟನೆ ಆಯೋಜಿಸಿರುವ 29ನೇ ವಾರ್ಷಿಕ ಸಮಾವೇಶವು ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಅಕ್ಟೋಬರ್ 1 ಮತ್ತು 2ರಂದು ನಗರದ ನಂತೂರು ಬಳಿಯ ಸಿ ಓ ಡಿ ಪಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಸಮಾವೇಶನವನ್ನು ಮಂಗಳೂರು ಧರ್ಮ ಕ್ಷೇತ್ರದ ಪರಮಪೂಜ್ಯ ಧರ್ಮಾಧ್ಯಕ್ಷರಾದ ಬಿಷಪ್ ಪೀಟರ್ ಪೌಲ್ ಸಲ್ದಾನ ರವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಐವನ್ ಡಿಸೋಜರವರು ಹಾಗೂ ಬೆಳ್ಳಾರಿ ಧರ್ಮ ಪ್ರಾಂತ್ಯದ ಪರಮ ಪೂಜ್ಯ ಧರ್ಮಾಧ್ಯಕ್ಷರಾದ ಬಿಷಪ್ ಹೆನ್ರಿ ಡಿಸೋಜರವರು ಭಾಗಿಯಾಗಲಿದ್ದಾರೆ ಸಮಾವೇಶವನ್ನು ಮಂಗಳೂರಿನ ಪ್ರಖ್ಯಾತ ಕೊಂಕಣಿ ವಾರಪತ್ರಿಕೆಯಾದ ‘ರಾಕ್ಣೊ’ ಸಂಘಟಿಸಲಿದೆ. ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಟೆಕ್ನಾಲಜಿ ಇವರು ಪ್ರಾಯೋಜಿಸುತ್ತಿದ್ದಾರೆ.
ಅಕ್ಟೋಬರ್ 2 ರಂದು ತಜ್ಞ ಮಂಡಳಿಯಿಂದ, ಗಾಂಧೀಜಿಯವರ ತತ್ವಗಳಾದ ಸತ್ಯ ಅಹಿಂಸೆ ಮತ್ತು ನ್ಯಾಯವನ್ನು ಎತ್ತಿ ಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಎಂಬ ವಿಷಯ ಮಂಡನೆ ನಡೆಯಲಿದೆ.ಕರ್ನಾಟಕ ಹೈಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿಗಳಾದ ಹೆಚ್. ಎನ್. ನಾಗಮೋಹನ್ ದಾಸ್ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಡಾ. ಪುರುಷೋತ್ತಮ ಬಿಳಿಮಲೆಯವರು, ಸಾಮಾಜಿಕ ಕಾರ್ಯಕರ್ತೆ ಮತ್ತು ಬರಹಗಾರರಾಗಿರುವ ಡಾ. ಅನ್ನಪೂರ್ಣ ಹೆಚ್. ಎಸ್. ಹಾಗೂ ಲೇಖಕ ಮತ್ತು ವಿಚಾರವಾದಿ ಡಾ. ಸೆಡ್ರಿಕ್ ಪ್ರಕಾಶ್ ಎಸ್ ಜೆ ಇವರು ವಿಷಯ ಮಂಡನೆ ಮಾಡಲಿದ್ದಾರೆ. ಮುಂಬೈಯ ದ ಎಕ್ಸಾಮಿನಾರ್ ಪತ್ರಿಕೆಯ ಸಂಪಾದಕರಾಗಿರುವ ಜೋಷನ್ ರೊಡ್ರಿಗಸ್ ರವರು ಕಲಾಪವನ್ನು ನಿರ್ವಹಿಸಲಿದ್ದಾರೆ. ಪ್ರಶಸ್ತಿ ವಿತರಣಾ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷರಾಗಿರುವ ಯು ಟಿ ಖಾದರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ಷಾಯ್ಸನ್ ಟಿ ಯುಸೇಫ್ , ವಿನಾಯಕ ನಿರ್ಮಲ್ ಹಾಗೂ ದಿ ನ್ಯೂ ಲೀಡರ್ ವಾರ ಪತ್ರಿಕೆಗೆ ಉತ್ತಮ ಪತ್ರಿಕೋದ್ಯಮದ ಪ್ರಶಸ್ತಿಯನ್ನು ನೀಡಲಾಗುತ್ತದೆ. ರಾಷ್ಟ್ರಾದ್ಯಂತ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವವರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನಾ ಕಾರ್ಯದರ್ಶಿಯವರಾದ ಫಾ. ರೂಪೇಶ್ ಮಾಡ್ತಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು