9:35 PM Thursday16 - April 2026
ಬ್ರೇಕಿಂಗ್ ನ್ಯೂಸ್
ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಅಥಣಿ: ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಐಗಳಿ ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗೆ ಗೆಲುವು

02/10/2024, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ
ಥ್ರೋ ಬಾಲ್ ಸ್ಪರ್ಧೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಸುಮಾರು 8 ತಾಲೂಕುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗೆ ಆಗಮಿಸಿದ್ದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಐಗಳಿ ಮತ್ತು ಮೂಡಲಗಿ ಶಾಲೆಯ ಕೊನೆಯ ರೋಚಕ ಪಂದ್ಯಾವಳಿಯಲ್ಲಿ ಐಗಳಿ ಅಪ್ಪಯ್ಯ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಜಯಶಾಲಿಯಾಯಿತು.
ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ
ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಸಹಕರಿಸಿದ ಕ್ರೀಡೆಗೆ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.


ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಪ್ರಾಚಾರ್ಯರು ಜಿ ಆರ್ ಎಂ ರಾಣಘಟ್ರ ಮುಖ್ಯ ಉಪಾಧ್ಯಾಯರು ಎಸ್. ಎಸ್. ಬಳ್ಳೊಳ್ಳಿ, ಎಸ್ .ಎಂ‌.ಜನಗೌಡ, ಎಸ್. ಎಚ್. ಕೊರಬು ದೈಹಿಕ ಶಿಕ್ಷಕರು ಆರ್ ಟಿ ಬಾಗಿ, ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು