10:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಥಣಿ: ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಐಗಳಿ ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗೆ ಗೆಲುವು

02/10/2024, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ
ಥ್ರೋ ಬಾಲ್ ಸ್ಪರ್ಧೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಸುಮಾರು 8 ತಾಲೂಕುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗೆ ಆಗಮಿಸಿದ್ದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಐಗಳಿ ಮತ್ತು ಮೂಡಲಗಿ ಶಾಲೆಯ ಕೊನೆಯ ರೋಚಕ ಪಂದ್ಯಾವಳಿಯಲ್ಲಿ ಐಗಳಿ ಅಪ್ಪಯ್ಯ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಜಯಶಾಲಿಯಾಯಿತು.
ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ
ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಸಹಕರಿಸಿದ ಕ್ರೀಡೆಗೆ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.


ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಪ್ರಾಚಾರ್ಯರು ಜಿ ಆರ್ ಎಂ ರಾಣಘಟ್ರ ಮುಖ್ಯ ಉಪಾಧ್ಯಾಯರು ಎಸ್. ಎಸ್. ಬಳ್ಳೊಳ್ಳಿ, ಎಸ್ .ಎಂ‌.ಜನಗೌಡ, ಎಸ್. ಎಚ್. ಕೊರಬು ದೈಹಿಕ ಶಿಕ್ಷಕರು ಆರ್ ಟಿ ಬಾಗಿ, ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು