5:55 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಬಾಲಕರ ವಿಭಾಗದಲ್ಲಿ ಹಲ್ಯಾಳ ಸರಕಾರಿ ಪ್ರೌಢಶಾಲೆ ತಂಡಕ್ಕೆ ಜಯ

02/10/2024, 14:10

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕ ಮತ್ತು ಬಾಲಕಿಯರ ಥ್ರೋ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಹಲ್ಯಾಳ ಸರಕಾರಿ ಪ್ರೌಢಶಾಲೆಯ ತಂಡ ಜಯಗಳಿಸಿದೆ.
ಸುಮಾರು 8 ತಾಲೂಕುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕ್ರೀಡಾಳುಗಳಿಗೆ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಹಲ್ಯಾಳ ಮತ್ತು ಅಳಗವಾಡಿ ಶಾಲೆಯ ತಂಡಗಳ ನಡುವೆ ನಡೆದ ಕೊನೆಯ ರೋಚಕ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಬಾಲಕರ ತಂಡವು ಜಯಶಾಲಿಯಾಯಿತು.


ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಕ್ರೀಡೆಗೆ ಸಹಕರಿಸಿದ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.
ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಗೀತಾ ತಕತರಾವ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಅಜಿತ್ ಸಿಂಧೆ ಸಂತೋಷ್ ಕಾಂಬಳೆ, ಆನಂದ ಹೊನಕಾಂಡೆ, ಸಂಜು ಭಾಗಡಿ, ಸಂಜು, ಮೆಂಡಿಗೇರಿ. ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಹಾಗೂ ತಾಲೂಕಿನ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಕ್ರೀಡಾಕೂಟದಲ್ಲಿ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು