10:52 PM Saturday5 - October 2024
ಬ್ರೇಕಿಂಗ್ ನ್ಯೂಸ್
ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ ಶ್ರೀನಿವಾಸಪುರ ವಿದ್ಯಾರ್ಥಿಗಳ ವಸತಿ ನಿಲಯ ದುರವಸ್ಥೆ: ಉಪ ಲೋಕಾಯುಕ್ತರು ಗರಂ; ಸರಕಾರಿ ಆಸ್ಪತ್ರೆಗೂ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಾರ್ವಜನಿಕರ ಆಗ್ರಹ

03/10/2024, 22:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಂಗಳೂರಿಗೆ ಸಾಗುವ ಮಾರ್ಗ ಮಧ್ಯೆ ಬಣಕಲ್, ಕೊಟ್ಟಿಗೆಹಾರದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರೊಂದಿಗೆ ಭೇಟಿಯಾಗಿ ಮಾತನಾಡಿದರು.ಬಣಕಲ್ ಸರ್ಕಾರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಬೇಕು. ಜನರು ರಾತ್ರಿ ಹೊತ್ತಲ್ಲಿ ಅನಾರೋಗ್ಯರಾದಾಗ ದೂರದ ಮಂಗಳೂರು, ಚಿಕ್ಕಮಗಳೂರು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ಇಲ್ಲಿಯೇ 24*7 ಸೌಲಭ್ಯ ದೊರೆತರೆ ಬಡವರು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದು ಮುಖಂಡರಾದ ಹರ್ಷ ಮೆಲ್ವಿನ್ ಲಸ್ರಾದೊ, ಅಬ್ದುಲ್ ರೆಹಮಾನ್ ಮತ್ತಿತರರು ಸಭಾಪತಿಗಳ ಗಮನಕ್ಕೆ ತಂದರು.
ಅಹವಾಲು ಸ್ವೀಕರಿಸಿ ಯು.ಟಿ.ಖಾದರ್ ಮಾತನಾಡಿ, ಬಣಕಲ್ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು. ಕಾಂಗ್ರೆಸ್ ಸರ್ಕಾರ ಬಡವರ ಪರ ಇದ್ದು ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕೊಟ್ಟಿಗೆಹಾರದಲ್ಲಿ ಸಭಾಪತಿ ಯು.ಟಿ.ಖಾದರ್ ಅವರಿಗೆ ಪ.ಪಂ.ಸದಸ್ಯ ಜಿ.ಬಿ.ಧರ್ಮಪಾಲ್, ಟಿ.ಎ.ಖಾದರ್, ರಾಮಚಂದ್ರೇಗೌಡ, ಬಿ.ಎಂ.ಸತೀಶ್, ಮೊಯಿದ್ದೀನ್,ಮುನೀರ್, ಪಿಶ್ ಮೋಣು, ಖಾಲೀದ್, ತನು ಕೊಟ್ಟಿಗೆಹಾರ ಮತ್ತಿತರ ಮುಖಂಡರು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು