1:27 AM Saturday6 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ

04/10/2024, 20:42

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.
ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದೆ. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ- 2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೋಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿ ಮಾಡುವಾಗ ಉಪ-ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ- ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು