3:23 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ

04/10/2024, 20:42

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.
ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದೆ. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ- 2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೋಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿ ಮಾಡುವಾಗ ಉಪ-ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ- ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು