12:52 PM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು