2:28 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು