3:47 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ

05/10/2024, 11:13

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ಲನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕೆ. ಅವರು ದೀಪ ಬೆಳಗಿ ಉದ್ಘಾಟಿಸಿದರು. ತಮ್ಮ ಭಾಷಣದಲ್ಲಿ ಅವರು ಭಾರತದಲ್ಲಿರುವ ಗ್ರಾಹಕ ಹಕ್ಕು, ಕರ್ತವ್ಯ, ಪರಿಹಾರ ಪಡೆಯುವ ಮಾರ್ಗ ಇತ್ಯಾದಿ ಎಲ್ಲದರ ಬಗೆಗೂ ಉದಾಹರಣೆಯೊಂದಿಗೆ ಮಾಹಿತಿಯನ್ನು ನೀಡಿದರು. ಉತ್ತಮ ಪರಿಹಾರಕ್ಕಾಗಿ ದಾಖಲೆಗಳೆಲ್ಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ ಎಂದು ಹಲವಾರು ಗ್ರಾಹಕ ಸಂಬಂಧಿ ನ್ಯಾಯ ದಾನದ ಸಂದರ್ಭದ ಉದಾಹರಣೆಗಳೊಂದಿಗೆ ವಿವರಿಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಪತ್ರಕರ್ತರು, ಲೇಖಕ ರಾಯಿ ರಾಜಕುಮಾರ ಮೂಡುಬಿದಿರೆ ರವರು ಮಾತನಾಡಿ “ಗ್ರಾಹಕನೇ ರಾಜ” ಹೇಗೆ ಎಂಬುದನ್ನು ಹಲವಾರು ಸಾಂದರ್ಭಿಕ ಮಾಹಿತಿಗಳೊಂದಿಗೆ ವಿವರಿಸಿದರು. ಅಲ್ಲದೆ ಗ್ರಾಹಕ ಜಾಗರೂಕನಾಗಿದ್ದರೆ ತನ್ನ ಜವಾಬ್ದಾರಿಯೊಂದಿಗೆ ಹಕ್ಕನ್ನು ಸಾಧಿಸಬಹುದಾಗಿದೆ. ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ವ್ಯವಹರಿಸಿದರೆ ಎಲ್ಲೆಡೆ ಬೆಲೆ, ಗೌರವ, ಶ್ರೇಷ್ಠತೆ ದೊರೆಯುತ್ತದೆ ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಅಂತೋನಿ ಪ್ರಕಾಶ್ ಮೊಂತೆರೋ ಅವರು ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಮಾರ್ಗದರ್ಶಕರಿಗಿಂತ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಕಾರ್ಯರೂಪಕ್ಕೆ ತಂದು ಕಾಲೇಜನ್ನು ಮಂಚೂಣಿಯಲ್ಲಿ ಕೊಂಡೊಯ್ಯಬೇಕೆಂದು ಕರೆಕೊಟ್ಟರು. ವೇದಿಕೆಯಲ್ಲಿ ಗ್ರಾಹಕ ಸಂಯೋಜಕ ಉಪನ್ಯಾಸಕರುಗಳಾದ ಪ್ರವೀಣ್ ಡಿ ಹಾಗೂ ಸ್ವಾತಿ ಶೆಟ್ಟಿ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿಯಾಂಕ ಸ್ವಾಗತಿಸಿದರು. ಇಮ್ರಾನ್ ತಾಜ್ ಕಾರ್ಯಕ್ರಮ ನಿರ್ವಹಿಸಿದರು. ಬಾಸಿಲ್, ತನ್ವೀರ್ ಪಿಂಟೋ, ಲಿಖಿತ ಅತಿಥಿ ಗಳ ಪರಿಚಯ ಮಾಡಿಕೊಟ್ಟರು. ವಿಶ್ಮಿತ್ ಧನ್ಯವಾದ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು