12:25 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ

05/10/2024, 23:26

ಬಂಟ್ವಾಳ(reporterkarnataka.com): ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.
ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್‌ಆರ್‌ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆ ನೀಡಲಾಯಿತು. ಈ ಬಸ್ ಪೊಳಲಿ ದೇಗುಲದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲ್ ಮಾರ್ಗವಾಗಿ ಮಂಗಳೂರ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಪಯಣಿಸಲಿದೆ.
ಇದರಿಂದಾಗಿ ಈ ಭಾಗದ ಜನರ ಸರಕಾರಿ ಬಸ್ಸಿನ ಬಹುಕಾಲದ ಕನಸು ನನಸಾಗಿದೆ. ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್‌ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು ಕೆಎಸ್‌ಆರ್‌ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು. ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ ಕೆಎಸ್‌ಆರ್‌ಟಿಸಿಬಸ್ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವು ಈ ಬಸ್‌ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು