7:28 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಮಹಿಳೆಯಿಂದ ಅಪಾಯಕಾರಿ ಸ್ಟಂಟ್: ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿ ಫೋಟೋಗೆ ಪೋಸ್!

07/10/2024, 00:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿಕೊಂಡು ಕಾರಿನಲ್ಲಿ ನಿಂತುಕೊಂಡು ಮಹಿಳೆಯೊಬ್ಬರು ಫೋಟೋಗೆ ಫೋಸ್ ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ನೋಂದಣಿ ಹೊಂದಿರುವ ಕಾರು ಆಲ್ದೂರಿನಿಂದ ಹಾಂದಿ ಮಾರ್ಗವಾಗಿ ಮೂಡಿಗೆರೆಗೆ ತೆರಳುತ್ತಿತ್ತು. ಈ ವೇಳೆ ಮಹಿಳೆ ಕಾರಿನ ಡೋರ್ ಓಪನ್ ಮಾಡಿಕೊಂಡು, ಕಾರಿನ ಡೋರ್ ತೆಗೆದುಕೊಂಡು ಕ್ಯಾಮರಾಕ್ಕೆ ವಿಡಿಯೋ ತಗೆಯಲು ಫೋಸ್ ಕೊಟ್ಟಿದ್ದಾರೆ. ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ. ರಸ್ತೆ ಮಧ್ಯೆ ಮಹಿಳೆಯ ಹುಚ್ಚಾಟ ಕಂಡು ಸ್ಥಳೀಯರು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಪ್ರತಿ ವಾರಾಂತ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ.


ಪ್ರವಾಸಕ್ಕೆ ಬಂದ ಕೆಲ ಪ್ರವಾಸಿಗರು ಈ ರೀತಿ ಹುಚ್ಚಾಟ ಮಾಡಿ ರಸ್ತೆ ಮಧ್ಯೆ ಏನಾದರೂ ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದು ಅಸಮಾಧಾನ ಹೊರ ಹಾಕಿರುವ ಸ್ಥಳೀಯರು ಕಾರು ಹಾಗೂ ಆ ಮಹಿಳೆ ಮೇಲೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು