7:41 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಮಣಿಪುರ ಕಳರಿ ಫೈಟ್: ಸುಂಕದಕಟ್ಟೆ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸತೀಶ್ ಎಸ್. ಗೆ ಕಂಚು

09/10/2024, 23:01

ಬಂಟ್ವಾಳ(reporterkarnataka.com): ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿ ಈ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.
ಕಳೆದ ಸೆ.21 ಮತ್ತು 22 ರಂದು ವಿಜಯಪುರದಲ್ಲಿ ನಡೆದ 5ನೇ ರಾಜ್ಯಮಟ್ಟದ ಥಾಂಗ್ ತಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.
ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಪೊಳಲಿ ಸರಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಹಾಗೂ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಅವರ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾಚೈತನ್ಯನಂದ‌ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು