1:16 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ನಾಡಹಬ್ಬ ದಸರಾಕ್ಕೆ ದೇಣಿಗೆ ಹಸ್ತಾಂತರ

10/10/2024, 20:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ವಿಜೃಂಭಣೆಯಿಂದ ನಡೆಯುವ ನಾಡಹಬ್ಬ ದಸರಾಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ತಾಲೂಕು ಆಡಳಿತ ವರ್ಗಕ್ಕೆ ಎರಡೂವರೆ ಲಕ್ಷ ರೂ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು.
ಎರಡನೇ ಮೈಸೂರು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿಯಲ್ಲಿ ನವರಾತ್ರಿ ಉತ್ಸವದ ದಸರಾ ಮಹೋತ್ಸವವೂ ಬಹಳ ವಿಜೃಂಭಣೆಯಿಂದ ನಡೆಯುತ್ತಿದ್ದು ಪಟ್ಟಣ ಪಂಚಾಯಿತಿ ಎಲ್ಲಾ ರೀತಿ ಯಲ್ಲೂ ಸಹಕಾರ ನೀಡುತ್ತಿದ್ದು, ಬನ್ನಿ ಮಂಟಪಕ್ಕೆ ಸಂಬಂಧಪಟ್ಟಂತೆ ಸುಣ್ಣ ಬಣ್ಣ ಹೊಡೆಯುವದಲ್ಲದೆ, ಜಂಗಲ್ ಕಟಿಂಗ್ ಸೇರಿದಂತೆ ಸಂಪೂರ್ಣವಾಗಿ ನೆಹರು ಉದ್ಯಾನವನದ ಬನ್ನಿ ಮಂಟಪ ಸುಂದರವಾಗಿ ಕಾಣುವಂತೆ ಪಟ್ಟಣ ಪಂಚಾಯತ್ ವಿಶೇಷ ಸಹಕಾರ ನಿಡುತ್ತಿದೆ.
ದಸರಾ ಉತ್ಸವಕ್ಕೆ ಎರಡುವರೆ ಲಕ್ಷ ರೂಪಾಯಿಗಳನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾದ ಗೀತಾ ರಮೇಶ್ ಗುರುವಾರ ತಾಲೂಕು ಕಚೇರಿಗೆ ತೆರಳಿ ಜಿಲ್ಲಾ ಉಪ ವಿಭಾಗ ಅಧಿಕಾರಿಯವರಿಗೆ ಚೆಕ್ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು