10:12 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಎನ್ ಐಟಿಕೆ ಪ್ರಾಧ್ಯಾಪಕ ಪ್ರೊ. ಹೇಮಂತ್ ಕುಮಾರ್ ಗೆ ಪ್ರೊ. ಸತೀಶ್ ಧವನ್ ಯಂಗ್ ಎಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರದಾನ

10/10/2024, 20:33

ಮಂಗಳೂರು(reporterkarnataka.com): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ಸರ್ಕಾರವು ಸ್ಥಾಪಿಸಿದ ಈ ಪ್ರಶಸ್ತಿಯು ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತ ರತ್ನ ಸಿ.ಎನ್.ಆರ್.ರಾವ್ ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬೆಂಗಳೂರಿನ ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ
ಏಕ್ರೂಪ್ ಕೌರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಎಂಜಿನಿಯರಿಂಗ್ ಮತ್ತು ಭೂ ವಿಜ್ಞಾನದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಂಜಿನಿಯರ್ ಗಳು ಮತ್ತು ವಿಜ್ಞಾನಿಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಪ್ರಶಸ್ತಿಯು ₹ 1,00,000 ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಪ್ರೊ.ಹೇಮಂತ ಕುಮಾರ್ ಅವರು ತಮ್ಮ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಎನ್ ಐಟಿಕೆ ಸಮುದಾಯದ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ತಮ್ಮ ಸಂಶೋಧನಾ ಪ್ರಯತ್ನಗಳನ್ನು ಪೋಷಿಸುವಲ್ಲಿ ಧನಸಹಾಯ ಸಂಸ್ಥೆಗಳು ಮತ್ತು ಸಹಯೋಗಿಗಳ ಪಾತ್ರಕ್ಕೂ ಅವರು ಧನ್ಯವಾದ ಅರ್ಪಿಸಿದರು.
ಎನ್ಐಟಿಕೆ ನಿರ್ದೇಶಕ ಪ್ರೊ.ಬಿ.ರವಿ ಅವರು ಪ್ರೊ.ಹೇಮಂತಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು