9:00 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು