5:03 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು