9:27 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು