12:21 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮೇಳೈಸಿದ ಕುಡ್ಲದ ಪಿಲಿಪರ್ಬ-2024 ಸೀಸನ್ 3: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೊಮ್ಮೆ ಮೆಲುಕು

11/10/2024, 22:14

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ
ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3ರ ಉದ್ಘಾಟನಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪಿಲಿಪರ್ಬ ಮೇಳೈಸಿತು.ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು, ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.


ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಿದ್ದು, ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು