10:42 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ 7ನೇ ವಾರ್ಷಿಕ ಹಬ್ಬ: ಪವಿತ್ರಾ ಪೂಜಾ ಬಲಿದಾನ ಅರ್ಪಣೆ

12/10/2024, 18:18

ಮಂಗಳೂರು(reporterkarnataka com): ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಸದಸ್ಯರು ಅಕ್ಟೋಬರ್ 5 ರಂದು ಸಂಜೆ ತಮ್ಮ ಸಭೆಯ 7ನೇ ವಾರ್ಷಿಕ ಹಬ್ಬವನ್ನು ಆಚರಿಸಿದರು. ದೇವರಿಗೆ ಸ್ತುತಿ ಸಲ್ಲಿಸಿ ಪವಿತ್ರಾ ಪೂಜಾ ಬಲಿದಾನ ಅರ್ಪಿಸಿ ಚರ್ಚ್ ಸಭಾ ಮಂದಿರದಲ್ಲಿ ಚಿಕ್ಕ ಕಾರ್ಯಕ್ರಮ ನಡೆಸಿದರು. ಆಂಜೆಲೊರ್ ಚರ್ಚಿನ ಪ್ರಧಾನ ಗುರು ವಂದನೀಯ ಫೆಡ್ರಿಕ್ ಮೊಂತೆರೊರವರು ಅಧ್ಯಕ್ಷತೆ ವಹಿಸಿದರು. ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಪ್ರಾಂತೀಯಾ ಸಹಾಯಕರಾದ ವಂದನೀಯ ಪ್ರಕಾಶ್ ಲೋಬೊ ಹಾಗೂ ಚರ್ಚಿನ ಸಹಾಯಕ ಗುರು ವಂದನೀಯ ಸ್ಟೇನಿ ಲೋಬೊ, ಆಂಜೆಲೊರ್ ಚರ್ಚಿನ ಉಪಾಧ್ಯಕ್ಷ ಸಹೋದರ ಪಾವ್ಲ್ ರೊಡ್ರಿಗಸ್, ಕಾರ್ಯದರ್ಶಿ ಸಹೋದರಿ ಲೋಲಿನಾ ಡಿ’ಸೋಜ , 21 ಆಯೋಗಗಳ ಸಂಚಾಲಕಿ ಸಹೋದರಿ ರೆನಿಟಾ ಮಿನೇಜಸ್, ಪ್ರಾಂತೀಯ ಖಜಾಂಚಿ ಸಹೋದರ ಆಲ್ವಿನ್ ಮೊಂತೆರೊ ಹಾಗೂ ಪ್ರತಿನಿಧಿ ಅತಿಥಿಗಳಾಗಿದ್ದರು.
ಅಧ್ಯಕ್ಷೆ ಸಹೋದರಿ ಸಿಂತಿಯಾ ರುಜಾರಿಯೊ ಸ್ವಾಗತಿಸಿದರು. ಕಾರ್ಯದರ್ಶಿ ಸಹೋದರಿ ಸುನೀತಾ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು. ಮನೋರಂಜನ ಕಾರ್ಯಕ್ರಮದೊಡನೆ ದೇವರನ್ನು ಹರಸಿ ಕಾರ್ಯಕ್ರಮ ಕೊನೆಗೊಂಡಿತು. ಸಹೋದರಿ ಸವಿತಾ ಫೆಲ್ಸಿ ರೊಡ್ರಿಗಸ್ ಕಾರ್ಯ ನಿಯೋಜಿಸಿದರು. ಸಹೋದರ ಡೆನಿಸ್ ಡಿ’ಸೋಜ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು