5:58 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

12/10/2024, 22:20

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು.
ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆ ನೀಡಿದರು.
“ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು