ಇತ್ತೀಚಿನ ಸುದ್ದಿ
ಆಗುಂಬೆ ಬಳಿ ಕಾಡಾನೆ ಹಾವಳಿ: ಭತ್ತದ ಬೆಳೆ ನಾಶ
13/10/2024, 10:57
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnatska@gmail.com
ಕಾಡಾನೆ ದಾಳಿಯಿಂದ ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ.
ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಬೆಳೆದಂತಹ ಬೆಳೆ ನಾಶವಾಗಿರುವುದಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.