2:17 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ

13/10/2024, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು.
ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು.ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಭಜನ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.


ಬಣಕಲ್: ಬಣಕಲ್ ನಲ್ಲಿ ಇದೇ ಮೊದಲ ಬಾರಿಗೆ ದಸರಾ ಉತ್ಸವ ನಡೆಸಲಾಯಿತು. ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಾರದಾ ಮೂರ್ತಿಯನ್ನು ಶನಿವಾರ ನವರಾತ್ರಿ ಉತ್ಸವದ ಕೊನೆಯ ದಿನದಂದು ವಿವಿಧ ವಾದ್ಯ ತಂಡಗಳ ಜೊತೆಗೆ ಕುಣಿತ ಭಜನೆಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು