8:04 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ

13/10/2024, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು.
ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು.ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಭಜನ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.


ಬಣಕಲ್: ಬಣಕಲ್ ನಲ್ಲಿ ಇದೇ ಮೊದಲ ಬಾರಿಗೆ ದಸರಾ ಉತ್ಸವ ನಡೆಸಲಾಯಿತು. ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಾರದಾ ಮೂರ್ತಿಯನ್ನು ಶನಿವಾರ ನವರಾತ್ರಿ ಉತ್ಸವದ ಕೊನೆಯ ದಿನದಂದು ವಿವಿಧ ವಾದ್ಯ ತಂಡಗಳ ಜೊತೆಗೆ ಕುಣಿತ ಭಜನೆಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು