8:15 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ

13/10/2024, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು.
ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು.ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಭಜನ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.


ಬಣಕಲ್: ಬಣಕಲ್ ನಲ್ಲಿ ಇದೇ ಮೊದಲ ಬಾರಿಗೆ ದಸರಾ ಉತ್ಸವ ನಡೆಸಲಾಯಿತು. ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಾರದಾ ಮೂರ್ತಿಯನ್ನು ಶನಿವಾರ ನವರಾತ್ರಿ ಉತ್ಸವದ ಕೊನೆಯ ದಿನದಂದು ವಿವಿಧ ವಾದ್ಯ ತಂಡಗಳ ಜೊತೆಗೆ ಕುಣಿತ ಭಜನೆಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು