2:41 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆ: ಜನಸಾಗರದ ನಡುವೆ ಶಾರದಾ ಮಾತೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

14/10/2024, 00:26

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಮಹೋತ್ಸದ ಅಂಗವಾಗಿ ದಸರಾ ಶೋಭಾಯಾತ್ರೆ ಭಾರೀ ಜನಸ್ತೋಮದ ಉಪಸ್ಥಿತಿಯಲ್ಲಿ ಭಾನುವಾರ ಆರಂಭವಾಯಿತು.
ದಸರಾ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ
ಬಿ. ಜನಾರ್ದನ ಪೂಜಾರಿ ಚಾಲನೆ ನೀಡಿದರು. ಮಹಾಗಣಪತಿ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಬಳಿಕ ನವದುರ್ಗೆಯರ ವಿಗ್ರಹದ ಪೂಜೆ ನಂತರ ಶಾರದಾ ದೇವಿ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಲಾಯಿತು.



ಕುದ್ರೋಳಿ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆ ಮಣ್ಣಗುಡ್ಡ ಮಾರ್ಗವಾಗಿ, ನಾರಾಯಣ ಗುರು ವೃತ್ತ -ಲಾಲ್‌ಬಾಗ್, ಬಲ್ಲಾಳ್‌ ಬಾಗ್, ಪಿವಿಎಸ್ ವೃತ್ತ, ನವಭಾರತ್ ಸರ್ಕಲ್, ಕೆ.ಎಸ್‌. ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಚಿತ್ರಾ ಟಾಕೀಸ್, ಅಳಕೆ ಮಾರ್ಗ ವಾಗಿ ಕ್ಷೇತ್ರ ಕುದ್ರೋಳಿಗೆ ಮರಳಲಿದೆ. ಅ. 14 ರಂದು ಬೆಳಿಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದೆಯ ವಿಸರ್ಜನೆ ನಡೆಯಲಿದೆ.



ಶಾಸಕ ವೇದವ್ಯಾಸ ಕಾಮತ್, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ , ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ, ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಜಿ ಪದ್ಮರಾಜ್ ಆರ್, ಆಡಳಿತ ಮಂಡಳಿಯ ಸದಸ್ಯರಾದ ರವಿಶಂಕರ್ ಮಿಜಾರ್, ಎಂ ಶೇಖರ ಪೂಜಾರಿ, ಸಂತೋಷ್ ಕುಮಾರ್,ಜಗದೀಪ್ ಡಿ ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷ ಡಾ.ಅನಸೂಯ ಬಿ.ಟಿ. ಸಾಲ್ಯಾನ್ , ಉಪಾಧ್ಯಕ್ಷ ಡಾ.ಬಿ.ಜೆ. ಸುವರ್ಣ ಸದಸ್ಯರಾದ ಚಿತ್ತರಂಜನ್ ಗರೋಡಿ ಮುಂತಾದವರು ಶೋಭಾಯಾತ್ರೆ ಚಾಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು