8:32 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆ: ಜನಸಾಗರದ ನಡುವೆ ಶಾರದಾ ಮಾತೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

14/10/2024, 00:26

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಮಹೋತ್ಸದ ಅಂಗವಾಗಿ ದಸರಾ ಶೋಭಾಯಾತ್ರೆ ಭಾರೀ ಜನಸ್ತೋಮದ ಉಪಸ್ಥಿತಿಯಲ್ಲಿ ಭಾನುವಾರ ಆರಂಭವಾಯಿತು.
ದಸರಾ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ
ಬಿ. ಜನಾರ್ದನ ಪೂಜಾರಿ ಚಾಲನೆ ನೀಡಿದರು. ಮಹಾಗಣಪತಿ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಬಳಿಕ ನವದುರ್ಗೆಯರ ವಿಗ್ರಹದ ಪೂಜೆ ನಂತರ ಶಾರದಾ ದೇವಿ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಲಾಯಿತು.



ಕುದ್ರೋಳಿ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆ ಮಣ್ಣಗುಡ್ಡ ಮಾರ್ಗವಾಗಿ, ನಾರಾಯಣ ಗುರು ವೃತ್ತ -ಲಾಲ್‌ಬಾಗ್, ಬಲ್ಲಾಳ್‌ ಬಾಗ್, ಪಿವಿಎಸ್ ವೃತ್ತ, ನವಭಾರತ್ ಸರ್ಕಲ್, ಕೆ.ಎಸ್‌. ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಚಿತ್ರಾ ಟಾಕೀಸ್, ಅಳಕೆ ಮಾರ್ಗ ವಾಗಿ ಕ್ಷೇತ್ರ ಕುದ್ರೋಳಿಗೆ ಮರಳಲಿದೆ. ಅ. 14 ರಂದು ಬೆಳಿಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದೆಯ ವಿಸರ್ಜನೆ ನಡೆಯಲಿದೆ.



ಶಾಸಕ ವೇದವ್ಯಾಸ ಕಾಮತ್, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ , ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ, ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಜಿ ಪದ್ಮರಾಜ್ ಆರ್, ಆಡಳಿತ ಮಂಡಳಿಯ ಸದಸ್ಯರಾದ ರವಿಶಂಕರ್ ಮಿಜಾರ್, ಎಂ ಶೇಖರ ಪೂಜಾರಿ, ಸಂತೋಷ್ ಕುಮಾರ್,ಜಗದೀಪ್ ಡಿ ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷ ಡಾ.ಅನಸೂಯ ಬಿ.ಟಿ. ಸಾಲ್ಯಾನ್ , ಉಪಾಧ್ಯಕ್ಷ ಡಾ.ಬಿ.ಜೆ. ಸುವರ್ಣ ಸದಸ್ಯರಾದ ಚಿತ್ತರಂಜನ್ ಗರೋಡಿ ಮುಂತಾದವರು ಶೋಭಾಯಾತ್ರೆ ಚಾಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು