12:23 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಒಂದೂವರೆ ವರ್ಷದ ಬಳಿಕ ನಂಜನಗೂಡು ನಗರಸಭೆಯ ಸಾಮಾನ್ಯ ಸಭೆ: ನಾಯಿ ಹಿಡಿಯಲು 40 ಲಕ್ಷ ರೂ. ಖರ್ಚು ಮಾಡಿದ ಅಧಿಕಾರಿಗಳು; ಶಾಸಕ ದರ್ಶನ್ ಧ್ರುವನಾರಾಯಣ್ ತರಾಟೆ

15/10/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಳೆದ ಒಂದೂವರೆ ವರ್ಷದ ಬಳಿಕ ನಗರಸಭೆಯ ನೂತನ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಾಮಾನ್ಯ ಸಭೆ ನಡೆಯಿತು.
ಸಭೆಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಸಾಥ್ ನೀಡಿದರು.
ಕಳೆದ ಒಂದೂವರೆ ವರ್ಷದಿಂದ ನಗರ ಸಭೆಯಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಲ್ಲದೆ ಅಧಿಕಾರಿಗಳದ್ದೇ ಅಂದಾ ದರ್ಬಾರ್ ಆಗಿದ್ದು ಈಗ ಅದಕ್ಕೆ ತೆರೆ ಬಿದ್ದಂತಾಗಿದೆ. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಎಲ್ಲಾ ವಾರ್ಡ್ ಗಳ ಸದಸ್ಯರು ಅಧಿಕಾರಿಗಳ ವಿರುದ್ಧ ಸಿಡಿದೆದ್ದು ಅಧಿಕಾರಿಗಳು ಯಾವುದೇ ಸದಸ್ಯರ ಮಾತಿಗೂ ಸ್ಪಂದಿಸದೆ ವಾರ್ಡ್ಗಳಲ್ಲಿ ಕೆಲಸಗಳನ್ನು ಮಾಡದೆ ಸ್ವೇಚ್ಛಾಚಾರವಾಗಿ ತಮಗಿಷ್ಟ ಬಂದಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿಸಿದರು.
ಅರ್ಧಂಬರ್ಧ ನಡೆದ ಕಾಮಗಾರಿಗಳಿಗೆ ಪೂರ್ತಿ ಬಿಲ್ ಮಾಡಿಕೊಂಡಿದ್ದಾರೆ. ಕಾಮಗಾರಿಯ ಕ್ರಿಯಾ ಯೋಜನೆಗಿಂತ ದುಪ್ಪಟ್ಟು ಲೆಕ್ಕ ತೋರಿಸುತ್ತಿದ್ದಾರೆ. ಸದಸ್ಯರುಗಳ ಗಮನಕ್ಕೂ ಬಾರದೆ ಯಾವುದೇ ಅನುಮತಿ ನೀಡದೆ ಹೋಟೆಲ್, ಲಾಡ್ಜ್ ಹಾಗೂ ಕಮರ್ಷಿಯಲ್ ಮಳಿಗೆಗಳಿಂದ ಅಕ್ರಮ ಹಣ ಪಡೆದು ಅವುಗಳನ್ನು ನಡೆಸುವಲ್ಲಿ ಸಹಕರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಪಟ್ಟಣದಲ್ಲಿ ನಾಯಿಗಳನ್ನು ಹಿಡಿಯಲು 40 ಲಕ್ಷ ರೂಪಾಯಿ ಲೆಕ್ಕ ತೋರಿಸಿದ್ದಾರೆ. ಇದನ್ನು ನೋಡಿದರೆ ನಗರಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ನಾಯಿ ಹಿಡಿಯುವುದೇ ವಾಸಿ ಎಂದು ಸದಸ್ಯ ಕಪಿಲೇಶ್ ಛೇಡಿಸಿದರು. ಇಂತಹ 10 ಹಲವಾರು ಕಾರಣಗಳಿಗಾಗಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ. ಇವೆಲ್ಲವನ್ನು ತನಿಖೆಗೆ ಒಳಪಡಿಸಬೇಕು ಎಂದು ಶಾಸಕರಲ್ಲಿ ಸದಸ್ಯರುಗಳು ಮನವಿ ಮಾಡಿಕೊಂಡರು.
ಇದೊಂದು ಅಧಿಕಾರಿಗಳ ಅಕ್ರಮಗಳನ್ನು ಸಕ್ರಮಗೊಳಿಸುವ ಸಭೆಯಾಗಿದೆ ಎಂದು ಅಧಿಕಾರಿಗಳ ಅಕ್ರಮಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.
ಎಲ್ಲಾ ಸದಸ್ಯರುಗಳ ಆರೋಪಗಳನ್ನು ಆಲಿಸಿದ ಶಾಸಕರು ನನಗೂ ಕೂಡ ಇದರಲ್ಲಿ ಅಕ್ರಮ ಅವ್ಯವಹಾರ ನಡೆದಿದೆ ಎಂದು ಸ್ಪಷ್ಟವಾಗುತ್ತಿದೆ. ಅದಕ್ಕಾಗಿ ತಮ್ಮೆಲ್ಲರ ಸಹಕಾರದಿಂದ ಇದನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಸದಸ್ಯರಿಗೆ ಆಶ್ವಾಸನೆ ನೀಡಿದರು.


ಅಲ್ಲದೆ ಕೆಲವು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾದ ಶಾಸಕರಿಗೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಬಾರದ ಕಾರಣ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಮೂಲಕ ಚಳಿ ಬಿಡಿಸಿ ಮುಂದೆ ಎಲ್ಲಾ ವಾರ್ಡ್ಗಳಿಗೂ ಭೇಟಿ ಕೊಟ್ಟು ಸದಸ್ಯರು ಹೇಳಿದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಮಾಡಬೇಕು ಎಂದು ತಾಕೀತು ಮಾಡಿದರು.
ನಗರಸಭಾ ಆಯುಕ್ತ ನಂಜುಂಡಸ್ವಾಮಿ, ಉಪಾಧ್ಯಕ್ಷೆ ರಿಯಾನ್ ಬಾನು ಸೇರಿದಂತೆ ಸದಸ್ಯರುಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು