8:57 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು