6:47 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

15/10/2024, 19:39

ಶಶಿ ಬೆತ್ತದಕೊಳಲು ಜಯಪುರ

info.reporterkarnataka@gmaio.com

ಬಿಳಾಲುಕೊಪ್ಪದಿಂದ ಬಸರೀಕಟ್ಟೆ ಹೋಗುವ ರಸ್ತೆಯ ಅಕ್ಕಪಕ್ಕ ಮಣ್ಣುಹಾಕಿದ್ದು ಮಳೆಗೆ ರಸ್ತೆ ಕೆಸರುಮಯವಾಗಿ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.


ಮೊದಲೇ ಹೊಂಡ ಗುಂಡಿಯಿಂದ ಕೂಡಿದ್ದ ಈ ಕಿರಿದಾದ ರಸ್ತೆಯಲ್ಲಿ ಓಡಾಡುವುದೇ ಸಮಸ್ಯೆಯಾಗಿತ್ತು. ಆದರೆ ಈಗ ರಸ್ತೆಯ ಎರಡು ಬದಿಯಲ್ಲೂ ಮಣ್ಣು ಹಾಕಲಾಗಿದೆ. ಎರಡ್ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸವಾರರಿಗೆ ಓಡಾಡಲು ಸಮಸ್ಯೆಯಾಗಿದೆ. ಈ ರಸ್ತೆಯೂ ಹೊರನಾಡು ಮತ್ತು ಶೃಂಗೇರಿ ಮುಖ್ಯ ರಸ್ಯೆಯೂ ಹೌದು. ದಸರ ರಜೆಯೂ ಇರುವುದರಿಂದ ವಾಹನದಟ್ಟನೆ ಜಾಸ್ತಿ ಇದೆ. ರಸ್ತೆ ಕೆಸರುಮಯವಾಗಿದ್ದಕ್ಕೂ, ಕಿರಿದಾದ ಹೊಂಡ ಗುಂಡಿ ಇರುವ ರಸ್ತೆಯಾಗಿದ್ದಕ್ಕೂ ಪ್ರತಿದಿನ ಓಡಾಡುವ ಬಸ್ಸುಗಳು ಎದುರಿನಿಂದ ಬರುವ ವಾಹನಗಳಿಗೆ ಜಾಗಬಿಡಲು ರಸ್ತೆಯಿಂದ ಕೆಳಗೆ ಇಳಿಸಿದಾಗ ಬಸ್ಸುಗಳು ಕೆಸರಿಗೆ ಸಿಲುಕುತ್ತಿದ್ದಾವೆ.
ಹೀಗಾಗಿ ಇಂದು ಮಧ್ಯಾಹ್ನದ ನಂತರ ಬಸ್ಸುಗಳು ಬಸರೀಕಟ್ಟೆಯಿಂದ ಬಿಳಾಲುಕೊಪ್ಪ ಕೊಗ್ರೆ ಮೂಲಕ ಜಯಪುರಕ್ಕೆ ಹೋಗಬೇಕಿದ್ದ ಮಾರ್ಗವನ್ನು ಬದಲಾಯಿಸಿ
ಬಸರೀಕಟ್ಟೆಯಿಂದ ಹೇರೂರು ಮಾರ್ಗ ಮೂಲಕ ಜಯಪುರಕ್ಕೆ ತಲುಪುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು