9:58 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಹಲ್ಲೆಗೊಳಗಾಗಿ ಬಜರಂಗದಳ ಮುಖಂಡನನ್ನು ಆಸ್ಪತ್ರೆಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಭೇಟಿ

17/10/2024, 20:36

ಮಂಗಳೂರು(reporterkarnataka.com):ಪೊಲೀಸ್ ಠಾಣೆಯಲ್ಲಿಯೇ ದುಷ್ಕರ್ಮಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಜರಂಗದಳ ಮುಖಂಡನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ಮಾಡಿ ಧೈರ್ಯ ತುಂಬಿದರು.
ಈ ಕುರಿತು ಮಾತನಾಡಿದ ಅವರು, ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಠಾಣೆಯಲ್ಲಿಯೇ ಹಲ್ಲೆಯಾಗುವುದೆಂದರೆ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಬೊಟ್ಟು ಮಾಡುತ್ತಿದೆ. ಕರಾವಳಿ ಪ್ರದೇಶದಲ್ಲಿ ಗಲಭೆ ನಡೆಸಲು ಸರಕಾರವೇ ಕುಮ್ಮಕ್ಕು ನೀಡುತ್ತಿದೆ.
ಆರಕ್ಷಕರನ್ನು ನಿಯಂತ್ರಿಸಿ ಇಡುವ ಸರಕಾರದ ಪ್ರಯತ್ನ ಜಿಲ್ಲೆಯಲ್ಲಿ ಮತ್ತಷ್ಟು ಗಲಭೆ ನಡೆಯಲು ಸಂಚು ರೂಪಿಸಿದಂತಿದೆ. ಚುನಾವಣೆಯ ಹೊಸ್ತಿಲಲ್ಲಿ ಕೋಮು ಗಲಭೆ ಎಬ್ಬಿಸಿ ಅದರ ಉಪಯೋಗ ಪಡೆಯಲು ಕಾಂಗ್ರೆಸ್ ಹವಣಿಸುತ್ತಿರುವುದು ಇದರಿಂದ ಬಯಲಾಗಿದೆ. ಹಲ್ಲೆಕೋರರನ್ನು ಹೆಡೆಮುರಿ ಕಟ್ಟಿ ಕಾನೂನು ಕ್ರಮ ಜರುಗಿಸದೆ ಹೋದರೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವಮೋರ್ಚಾ ಮಂಗಳೂರು ಮಂಡಲ‌ ಅಧ್ಯಕ್ಷ ಮುರಳಿ ಕೊಣಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು