11:41 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

18/10/2024, 14:14

ಮಂಗಳೂರು(reporterkarnataka.com): ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಅಕ್ಟೋಬರ್17ರಂದು ಆಯೋಜಿಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.
ಮೈಕಲ್ ಡಿಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ಅವರು ಹಾಜರಿದ್ದರು.
ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ದಾನಿಗಳಾದ ಮೈಕಲ್ ಡಿ ಸೋಜ ಮತ್ತು ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು.
ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತ್ರ ವಿತರಿಸಲಾಗುವುದು.
ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು