12:15 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

18/10/2024, 14:14

ಮಂಗಳೂರು(reporterkarnataka.com): ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಅಕ್ಟೋಬರ್17ರಂದು ಆಯೋಜಿಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.
ಮೈಕಲ್ ಡಿಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ಅವರು ಹಾಜರಿದ್ದರು.
ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ದಾನಿಗಳಾದ ಮೈಕಲ್ ಡಿ ಸೋಜ ಮತ್ತು ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು.
ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತ್ರ ವಿತರಿಸಲಾಗುವುದು.
ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು