11:19 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು ನಡೆಯಲಿತ್ತು ವಿವಾಹ

21/10/2024, 11:31

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಸಮೀಪದ ಬಜ್ಜೋಡಿ ಬಳಿ ನಡಿದೆ.

ಕೋಡಿಕಲ್‌ನ ಕ್ರಿಸ್ಟಿ ಕ್ರಾಸ್ತಾ (27) ಮೃತಟ್ಟ ಯುವತಿ. ಭಾನುವಾರ ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಕ್ರಿಸ್ಟಿ ಕ್ರಾಸ್ತಾ ಅವರು ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದರು. ಭಾನುವಾರ ಸಂಜೆ ಆಸ್ಪತ್ರೆಯತ್ತ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ನಂತೂರು ಜಂಕ್ಷನ್ ಸಮೀಪದ ಬಜ್ಜೋಡಿ ತಲುಪಿದಾಗ ಸ್ಕೂಟರ್‌ಗೆ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ ಲಾರಿಯು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಕ್ರಿಸ್ಟಿ ಕ್ರಾಸ್ತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಿಸ್ಟಿ ಅವರಿಗೆ ಮದುವೆ ನಿಶ್ಚಿತವಾಗಿತ್ತು. ನವೆಂಬರ್ 23 ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು