12:16 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾವಣೆ

21/10/2024, 11:49

ಪುತ್ತೂರು(reporterkarnataka.com): ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಭಾನುವಾರ ಆರಂಭಿಸಲಾಯಿತು.
ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಹಾಗೂ ಪುತ್ತೂರು ಶ್ರೀ ಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಹಸಂತಡ್ಕ ಮುರಳಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಚಾಲನೆ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100ಕ್ಕೂ ಮಿಕ್ಕಿ ನೋಂದಾಯಿತ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮಾಹಿತಿಯನ್ನು ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಬಾಲಕೃಷ್ಣ ಅವರು ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಸಂಚಾಲಕರಾದ ವಸಂತ ನಡುಬೈಲು , ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ ಮತ್ತು ವಸಂತ ಹುದೇರಿ, ಅಧ್ಯಕ್ಷರಾದ ಧ್ರುವಕುಮಾರ್ ಕೇರ್ಪಡ , ಶ್ರೀ ಕೇತ್ರ ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪರಾಜ ರೈ , ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಸುಹಾಸ್ ಅಲೆಕ್ಕಾಡಿ , ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಪದ್ಮನಾಭ ಪೂದೆ , ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು , ಪೋಷಕರು
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು