4:38 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾವಣೆ

21/10/2024, 11:49

ಪುತ್ತೂರು(reporterkarnataka.com): ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಭಾನುವಾರ ಆರಂಭಿಸಲಾಯಿತು.
ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಹಾಗೂ ಪುತ್ತೂರು ಶ್ರೀ ಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಹಸಂತಡ್ಕ ಮುರಳಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಚಾಲನೆ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100ಕ್ಕೂ ಮಿಕ್ಕಿ ನೋಂದಾಯಿತ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮಾಹಿತಿಯನ್ನು ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಬಾಲಕೃಷ್ಣ ಅವರು ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಸಂಚಾಲಕರಾದ ವಸಂತ ನಡುಬೈಲು , ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ ಮತ್ತು ವಸಂತ ಹುದೇರಿ, ಅಧ್ಯಕ್ಷರಾದ ಧ್ರುವಕುಮಾರ್ ಕೇರ್ಪಡ , ಶ್ರೀ ಕೇತ್ರ ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪರಾಜ ರೈ , ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಸುಹಾಸ್ ಅಲೆಕ್ಕಾಡಿ , ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಪದ್ಮನಾಭ ಪೂದೆ , ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು , ಪೋಷಕರು
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು