12:00 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಪಟಾಕಿ ಸಿಡಿಸಲು ಸಮಯ ನಿಗದಿ: ಪರಿಸರಸ್ನೇಹಿ ದೀಪಾವಳಿ ಆಚರಿಸಲು ಸಚಿವ ಈಶ್ವರ ಖಂಡ್ರೆ ಸಲಹೆ

21/10/2024, 14:37

ಬೆಂಗಳೂರು(reporterkarnataka.com): ದೀಪಾವಳಿ ಹಿನ್ನೆಲೆಯಲ್ಲಿ ಸರಕಾರ ಪಟಾಕಿ ಸಿಡಿಸಲು ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ಸುಪ್ರೀಂಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮಿಸುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ಇದರ ಅನ್ವಯ ಹಸಿರು ಪಟಾಕಿ ಸಿಡಿಸಲು ಮಾತ್ರ ಸರಕಾರ ಅವಕಾಶ ಕಲ್ಪಿಸಿದೆ. ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಯಲು ಮತ್ತು ಹಿರಿಯ ನಾಗರಿಕರ, ಪುಟ್ಟ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ ಹಾಗೂ ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿ ಪ್ರಾಣಿ ಸಂಕುಲಗಳಿಗೆ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ದೀಪದಿಂದ ದೀಪ ಹಚ್ಚಿ ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಎಂದು ಸಚಿವ ಈಶ್ವರ ಖಂಡ್ರೆ ಕರೆಯಿತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು